ಹೊಸನಗರ : ತಾಲೂಕಿನ ಕಾರಣಗಿರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಉಳಿತಾಯ ಖಾತೆಯ ಮೂಲಕ 436 ರೂ. ಹಣ ನೀಡಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ವಿಮಾ ಯೋಜನೆ ಪಾಲಿಸಿ ಹೊಂದಿದ್ದ ಖಾತೆದಾರ ಮಂಜುನಾಥ್ ಇತ್ತೀಚೆಗೆ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾದ ಕಾರಣ ಮೃತರ ಪತ್ನಿ ಯಶೋಧರಿಗೆ ಬ್ಯಾಂಕ್ನ ವ್ಯವಸ್ಥಾಪಕ ಪದ್ಮಾಕ್ಷ 2 ಲಕ್ಷ ರೂ. ಪರಿಹಾರದ ಚೆಕನ್ನು ವಿವರಿಸಿದರು.
ಈ ವೇಳೆ ಗ್ರಾಮ ಪಂಚಾಯತಿ ಸದಸ್ಯ ಹನಿಯ ಗುರುಮೂರ್ತಿ, ಸಾಮಾಜಿಕ ಕಾರ್ಯಕರ್ತ ವೀರಪ್ಪ ಗೌಡ, ಬ್ಯಾಂಕ್ನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.







