ರಿಪ್ಪನ್ಪೇಟೆ: ಸಮೀಪದ ಗವಟೂರು ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಮೇ 13 ರಂದು ಸೋಮವಾರ ಶ್ರೀರಾಮೇಶ್ವರ ದೇವರ ಪ್ರತಿಷ್ಟಾಪನಾ 15ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಪೂಜಾ ಕಾರ್ಯಗಳನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಶ್ರೀರಾಮೇಶ್ವರ ದೇವರಿಗೆ ಶ್ರೀರುದ್ರಾಭಿಷೇಕ, ಅಷ್ಟೋತ್ತರ ಬಿಲ್ವಾರ್ಚನೆ, ರುದ್ರಹೋಮ, ಪಂಚಾಮೃತ ಅಭಿಷೇಕ, ಪರಿವಾರ ದೇವರುಗಳಿಗೆ ಪೂಜೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಜರುಗಲಿದೆ.
ನಂತರ ಸಾಮೂಹಿಕ ಅನ್ನಸಂತರ್ಪಣೆ ಸಹ ನಡೆಯಲಿದೆ ಸಕಲ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನಾರ್ಶೀವಾದ ಪಡೆದುಕೊಳ್ಳುವಂತೆ ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.