ರಿಪ್ಪನ್ಪೇಟೆ: ಮಂಗಳವಾರ ಮಧ್ಯಾಹ್ನ ಭಾರಿ ಮಳೆ, ಗಾಳಿಗೆ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಮನೆಯೊಂದರ ಮೇಲೆ ತೆಂಗಿನಮರವೊಂದು ಬಿದ್ದು ಹಾನಿ ಸಂಭವಿಸಿದ್ದು ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣವೇ ಸರ್ಕಾರ ಪರಿಹಾರ ನೀಡುವಂತೆ ಆಗ್ರಹಿಸಿದರು
ಈ ಸಂದರ್ಭದಲ್ಲಿ ಮನೆ ಹಾನಿಗೀಡಾದ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದ ಅವರು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಯನ್ನು ಸ್ಥಳದಿಂದಲೇ ಸಂಪರ್ಕಿಸಿ ಒತ್ತಾಯಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗರತ್ನ ಎಂಬುವರ ವಾಸದ ಮನೆಯ ಬಳಿಯಲ್ಲಿದ್ದ ತೆಂಗಿನಮರವೊಂದು ಗಾಳಿ ಮಳೆಗೆ ಮನೆಯ ಮೇಲೆ ಬಿದ್ದು ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಯಾವುದೇ ಪ್ರಾಣ ಹಾನಿಯಾಗದೇ ಭಗವಂತ ರಕ್ಷಣೆ ಮಾಡಿದ್ದಾನೆಂದು ಹೇಳಿ, ಸರ್ಕಾರ ಕೂಡಲೇ ಹಾನಿಗೀಡಾಗಿರುವ ರೈತ ಕುಟುಂಬಕ್ಕೆ ತುರ್ತು ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೋಡೂರು ಗ್ರಾಮ ಪಂಚಾಯ್ತಿ ಸದಸ್ಯ ಶೇಖರಪ್ಪ ಹಿಂಡ್ಲೆಮನೆ, ಗ್ರಾಮಸ್ಥರು, ಇನ್ನಿತರರು ಇದ್ದರು.