HOSANAGARA | ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ನಿರ್ವಹಣೆಗೆ ಜಿಲ್ಲಾಧಿಕಾರಿಗಳವರ ಅಧ್ಯಕ್ಷತೆಯಲ್ಲಿ ಭವನ ನಿರ್ವಹಣಾ ಸಮಿತಿಯನ್ನು ರಚಿಸಬೇಕಾಗಿರುತ್ತದೆ. ಅದರಂತೆ, ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಲುವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಛೇರಿಯ ಸಮಯದಲ್ಲಿ ಸಹಾಯಕ ನಿರ್ದೆಶಕರು (ಗ್ರೇಡ್2) ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿಚಾರಿಸಬಹುದಾಗಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಸದಸ್ಯರ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ
Written by Malnadtimes.in
Published on: