HOSANAGARA | ಭಾರಿ ಗಾಳಿ ಮಳೆಗೆ ಮನೆಗೋಡೆ ಉರುಳಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮದಲ್ಲಿ ನಡೆದಿದೆ.
ಪುಟ್ಟಮ್ಮ ಕೋಂ ನಾಗರಾಜ ಇವರಿಗೆ ಸೇರಿದ ವಾಸದ ಮನೆ ಇದಾಗಿದ್ದು, ತಡರಾತ್ರಿ ಗೋಡೆ ಕುಸಿದು ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.
ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಗ್ರಾಮ ಆಡಳಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧನ ಸಹಾಯ :
ಬಾರಿ ಮಳೆಯಿಂದಾಗಿ ಗೋಡೆ ಬಿದ್ದಿದ್ದ ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪುಟ್ಟಮ್ಮ ಕುಟುಂಬದವರಿಗೆ ಸಾಂತ್ವನ ಹೇಳಿ ಶಾಸಕರ ಪರವಾಗಿ ವಯಕ್ತಿಕ ಆರ್ಥಿಕ ನೆರವು ನೀಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನ ಸಮಿತಿ ಅಧ್ಯಕ್ಷರಾದ ಚಿದಂಬರ ಮಾರುತಿಪುರ, ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಿಕಾ ಕೃಷ್ಣ, ಮಾಜಿ ಉಪಾಧ್ಯಕ್ಷೆ ಜಯಮ್ಮ ಗ್ರಾಮ ಪಂಚಾಯತ್ ಸದಸ್ಯ ಇಂದ್ರೇಶ್ ಹೊಸಕೆರೆ, ಇನ್ನಿತರರು ಉಪಸ್ಥಿತರಿದ್ದರು.