HOSANAGARA | ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಮೇಲಿನಸಂಪಳ್ಳಿ ವಾರ್ಡ್ನ ಸದಸ್ಯ ಅವಿನಾಶ್ ಸಕಲಾತಿ ಅವಿರೋಧ ಆಯ್ಕೆಯಾದರು.
ಒಟ್ಟು 15 ಸದಸ್ಯ ಬಲದ ಮಾರುತಿಪುರ ಗ್ರಾಮ ಪಂಚಾಯತಿಯಲ್ಲಿ ಈವರೆಗೆ ಉಪಾಧ್ಯಕ್ಷರಾಗಿದ್ದ ಶಂಕರಶೆಟ್ಟಿ ಅವರು ಇತ್ತೀಚೆಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸ್ಥಾನ ತೆರವಾಗಿತ್ತು. ಕೃಷಿ ಅಧಿಕಾರಿ ಶರಣಪ್ಪ ಬೀರಾದಾರ್ ಚುನಾವಣಾಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಚುನಾವಣಾ ಪ್ರಕ್ರಿಯೆ ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಚ್.ಬಿ.ಚಿದಂಬರ್, ಗ್ರಾಪಂ ಅಧ್ಯಕ್ಷೆ ದೀಪಿಕಾ ಕೃಷ್ಣ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.