HOSANAGARA | ಭಾರಿ ಮಳೆಗೆ ಮಾರುತಿಪುರ ಗ್ರಾಪಂ ವ್ಯಾಪ್ತಿಯ ನೆಲಗಳಲೆ – ಕಚ್ಚಿಗೆಬೈಲು ಸಂಪರ್ಕಿಸುವ ಮುಖ್ಯ ರಸ್ತೆಯಿಂದ ಸೋರೆಕೊಪ್ಪ ಮಂಜಪ್ಪ ಮತ್ತು ಇತರ 7 ಮನೆಗಳಿಗೆ ಸಂಪರ್ಕಿಸುವ ಅಡ್ಡ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ.
ಪರಿಣಾಮ ಶಾಲೆ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಮತ್ತು ಇಲ್ಲಿನ ನಾಗರಿಕರಿಗೆ ತೀವ್ರ ತೊಂದರೆ ಉಂಟಾಗಿದ್ದು ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಹೊಸನಗರ ತಹಶೀಲ್ದಾರ್ ಹಾಗೂ ತಾಪಂ ಇಒ ರವರಿಗೆ ನೆಲಗಳಲೆ ಮತ್ತು ಸೋರೆಕೊಪ್ಪ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.