ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು !

Written by Malnadtimes.in

Published on:

WhatsApp Group Join Now
Telegram Group Join Now

SAGARA | ಶರಾವತಿ ಹಿನ್ನೀರಿನಲ್ಲಿ (Sharavathi Backwater) ಮುಳುಗಿ ಯುವಕನೊಬ್ಬ ಸಾಲನ್ನಪ್ಪಿರುವ ಘಟನೆ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಮಂಗಳವಾರ ನಡೆದಿದೆ.

ಬ್ರಾಹ್ಮಣಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕ. ಜಡ್ಡಿನಬೈಲು ಶರಾವತಿ ಹಿನ್ನೀರಿನಲ್ಲಿ ಮೀನುಗಾರ ರವಿ ಎಂಬುವವರು ಸೋಮವಾರ ಸಂಜೆ ಮೀನಿಗಾಗಿ ಬಲೆ ಹಾಕಿ ಬಂದಿದ್ದರು. ಮಂಗಳವಾರ ಬೆಳಿಗ್ಗೆ ಬಲೆ ತೆಗೆಯಲು ಹಿನ್ನೀರಿಗೆ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಭಾರಿ ಮಳೆಯಿಂದಾಗಿ ಶರಾವತಿ ಹಿನ್ನೀರಿನಲ್ಲಿ ರಭಸ ಹೆಚ್ಚಿದ್ದು, ಜೊತೆಗೆ ಮರಮಟ್ಟಿಗಳಲ್ಲಿ ನೀರು ಏರಿದೆ. ಮರಮಟ್ಟಿಗಳಿಗೆ ಬಲೆ ಸಿಕ್ಕಿದ್ದನ್ನು ರವಿ ಬಿಡಿಸಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಈ ಘಟನೆ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!