SHIKARIPURA | ಸೆಲ್ಫಿ ತೆಗೆಯಲು ಹೋಗಿ ಕಲ್ಯಾಣಿಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿನ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯಲ್ಲಿ ಇಂದು ನಡೆದಿದೆ.
ತಾಹೀರ್ (21) ಮೃತ ದುರ್ಧೈವಿ. ಈತ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಗಂಡಗದಕೇರಿ ನಿವಾಸಿ. ತನ್ನ ಸ್ನೇಹಿತರ ಜೊತೆ ಉಡುತಡಿಗೆ ಹೋಗಿದ್ದ ತಾಹೀರ್, ಅಲ್ಲಿನ ಪ್ರವಾಸಿ ತಾಣದ ಕಲ್ಯಾಣಿ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ನೀರಿಗೆ ಬಿದ್ದು ಮೇಲೇಳಲಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.