SAGARA | ಅಡಿಕೆಗೆ ತೀವ್ರ ಕೊಳೆ ಹಾವಳಿಯಿಂದಾಗಿ ಸಂಕಷ್ಟಕ್ಕೊಳಗಾಗಿ ರೈತನೋರ್ವ ಕೃಷಿಹೊಂಡಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬ್ಯಾಕೋಡು ಸಮೀಪದ ಬೈನೆಮನೆಯಲ್ಲಿ ನಡೆದಿದೆ.
ಅಶೋಕ (42) ಆತ್ಮಹತ್ಯೆಗೆ ಶರಣಾದ ರೈತ. ಈತ ಎರಡು ಎಕರೆ ಅಡಿಕೆ ತೋಟ ಹೊಂದಿದ್ದು ಬ್ಯಾಂಕ್ಗಳಲ್ಲಿ ದೊಡ್ಡ ಮೊತ್ತದ ಸಾಲ ಪಡೆದಿದ್ದರು. ಈ ನಡುವೆ ಅಡಿಕೆಗೆ ಕೊಳೆ ರೋಗ ಬಾಧಿಸಿದ ಹಿನ್ನೆಲೆಯಲ್ಲಿ ಅಡಿಕೆ ಬೆಳೆ ಸಂಪೂರ್ಣವಾಗಿ ನೆಲದ ಪಾಲಾಗಿತ್ತು. ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಮೂರು ಮಕ್ಕಳ ವಿದ್ಯಾಭ್ಯಾಸದ ಒತ್ತಡವೂ ಸೇರಿದಂತೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಇದರಿಂದ ಮನನೊಂದ ಅಶೋಕ ಮನೆಯ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.