HOSANAGARA | ತಾಲೂಕಿನ ಪ್ರಾಥಮಿಕ ಶಿಕ್ಷಕರ ಸಂಘದ ನೂತನ ಕಾರ್ಯದರ್ಶಿಯಾಗಿ ಪುಟ್ಟಸ್ವಾಮಿ ಕೆ.ಜಿ. ಕತ್ರಿಕೊಪ್ಪ, ಖಜಾಂಚಿಯಾಗಿ ಗಣೇಶ್ ಸೋರೆಕೊಪ್ಪ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮೇಲಿನಬೆಸಿಗೆ ಎಂ.ಎನ್. ಪೂರ್ಣಿಮಾ ಅವಿರೋಧವಾಗಿ ಆಯ್ಕೆಯಾದರು.
ಶಿಕ್ಷಕರ ಸಂಘದ ಆವರಣದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಹೆಚ್.ಆರ್ ಸುರೇಶ್ರವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಈ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಈ ಹಿಂದಿನ ಕಾರ್ಯದರ್ಶಿಯಾದ ಮಹಮದ್ ಅಲ್ತಾಫ್ರವರು ತಾಲ್ಲೂಕಿನಿಂದ ವರ್ಗಾವಣೆಯಾಗಿದ್ದು ತಮ್ಮ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ವೇಳೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ಬಸವಣ್ಣಪ್ಪ, ಗೌರವಾಧ್ಯಕ್ಷ ಜಗದೀಶ್ ಕಾಗಿನೆಲೆ, ಉಪಾಧ್ಯಕ್ಷೆ ಲಿಲ್ಲಿ ಡಿಸೋಜಾ, ಶಿವಮೂರ್ತಿ, ಶಿವಪ್ಪ ಹೆಚ್.ಸಿ, ಡಿ. ಗಂಗಾನಾಯಕ್ ಹಾಗೂ ಡಿ. ಧರ್ಮಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.