ಬಾಟಲಿ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾ*ವು !

Written by Malnadtimes.in

Published on:

WhatsApp Group Join Now
Telegram Group Join Now

SHIKARIPURA ; ಒಂದೂವರೆ ವರ್ಷದ ಮಗುವೊಂದು ಬಾಟಲಿ ಮುಚ್ಚಳ ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ.

ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ಒಂದೂವರೆ ವರ್ಷ ನಂದೀಶ್ ಮೃತಪಟ್ಟ ಮಗುವಾಗಿದ್ದು, ಮನೆಯಲ್ಲಿ ಆಟವಾಡುವ ವೇಳೆ ಬಾಟಲಿಯ ಮುಚ್ಚಳ ನುಂಗಿ ಮಗು ಸಾವನ್ನಪ್ಪಿದೆ.

ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ನಂದೀಶ್ ಆಟವಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ನುಂಗಿದ ಮುಚ್ಚಳ ಗಂಟಲಲ್ಲಿ ಸಿಲುಕಿದೆ. ನಂತರ ಮುಗುವಿನ ಉಸಿರಾಟದಲ್ಲಿ ಏರುಪೇರಾಗಿದೆ. ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದೆ ಮಗು ಸಾವನ್ನಪ್ಪಿದೆ.

Leave a Comment

error: Content is protected !!