Accident | ಬೈಕ್ ಮತ್ತು ಪಿಕಪ್ ವಾಹನದ ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು !

Written by Malnadtimes.in

Published on:

WhatsApp Group Join Now
Telegram Group Join Now

THIRTHAHALLI | ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಆಗುಂಬೆ (Agumbe) ಸಮೀಪದ ಬಿದರಗೋಡು ಬಳಿ ಸಂಭವಿಸಿದೆ‌.

ಅಗಸರಕೋಣೆ ಶರತ್ (35) ಮತ್ತು ಪಿಕಪ್ ವಾಹನದಲ್ಲಿದ್ದ ಕೇರಳ ಮೂಲದ ಮತ್ತೋರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈತನ ಹೆಸರು ಪತ್ತೆಯಾಗಿಲ್ಲ. ಪಿಕಪ್ ವಾಹನ ಚಾಲಕ ಬಾವಿ ಕೆಲಸ ಮಾಡುವ ಸಂತೋಷ್ ಎಂಬಾತ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಮಧ್ಯಾಹ್ನ 1:15ಕ್ಕೆ ಬಿದರಗೋಡು ಮಾರ್ಗವಾಗಿ ಚಲಿಸುತ್ತಿದ್ದ ಬೈಕ್ ಏಕಾಏಕಿ ಪಿಕಪ್ ವಾಹನಕ್ಕೆ ಅಪ್ಪಳಿಸಿದ್ದು ಸವಾರ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಇದ್ದ ಪಿಕಪ್ ವಾಹನ ಚಲಿಸುತ್ತಿರುವ ವೇಗವನ್ನು ಕಡಿತಗೊಳಿಸಲು ಮುಂದಾಗಿದ್ದು ಗುಂಡಿಗೆ ಬಿದ್ದು ವಾಹನದಲ್ಲಿದ್ದ ಕೇರಳ ಮೂಲದ ಯುವಕ ಮೃತಪಟ್ಟಿದ್ದಾನೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ

ಆಗುಂಬೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!