ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯನ್ನೇ ಬಡಿದು ಕೊಂದ ಪತ್ನಿ !

Written by Malnadtimes.in

Published on:

WhatsApp Group Join Now
Telegram Group Join Now

ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯನ್ನೇ ಬಡಿದು ಕೊಂದ ಪತ್ನಿ !

ಚಿಕ್ಕಮಗಳೂರು : ಗಂಡ-ಹೆಂಡತಿ (Husband and Wife) ನಡುವಿನ ಜಗಳ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ಚಿಕ್ಕಮಗಳೂರಿನ (Chikkamagaluru) ಗೌರಿಕಾಲುವೆಯ ವಾಟರ್ ಟ್ಯಾಂಕ್ ಬಡಾವಣೆಯಲ್ಲಿ ನಡೆದಿದೆ.

ಸುರೇಶ (55) ಕೊಲೆಯಾದ ವ್ಯಕ್ತಿ. ಮರಗೆಲಸ ವೃತ್ತಿ ಮಾಡುತ್ತಿದ್ದ ಸುರೇಶ ಪ್ರತಿದಿನ ಮದ್ಯಪಾನ ಮಾಡಿ ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಕಳೆದ ರಾತ್ರಿ ಸಹ ಇವರಿಬ್ಬರ ನಡುವೆ ಜಗಳ ನಡೆದಿದ್ದು, ಆತನ ಕಾಟ ತಾಳಲಾರದೆ ಪತ್ನಿ ಭಾರತಿ ಹೊಡೆದಾಟಕ್ಕೆ ಇಳಿದಿದ್ದಾಳೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ದೊಣ್ಣೆ ತೆಗೆದುಕೊಂಡು ಬಲವಾಗಿ ಸುರೇಶನ ತಲೆಗೆ ಬಾರಿಸಿದ್ದಾಳೆ. ಈ ವೇಳೆ ಸುರೇಶ ಹೆಡ್ ಇಂಜ್ಯುರಿ ಉಂಟಾಗಿ ಕುಸಿದು ಬಿದಿದ್ದಾನೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ.

ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Leave a Comment

error: Content is protected !!