ಲಾರಿ ಮತ್ತು ಓಮ್ನಿ ನಡುವೆ ಭೀಕರ ಅಪಘಾತ, ಧರ್ಮಸ್ಥಳದಿಂದ ವಾಪಾಸ್ ಆಗುತ್ತಿದ್ದ ನಾಲ್ವರು ದುರ್ಮರಣ !

Written by Malnadtimes.in

Published on:

WhatsApp Group Join Now
Telegram Group Join Now

ಲಾರಿ ಮತ್ತು ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಧರ್ಮಸ್ಥಳದಿಂದ ವಾಪಾಸ್ ಆಗುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು !

ಮೂಡಿಗೆರೆ : ಮೆಸ್ಕಾಂ ಲಾರಿ ಮತ್ತು ಮಾರುತಿ ಓಮ್ನಿ (Omni) ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ (Death) ಘಟನೆ ಬಣಕಲ್-ಕೊಟ್ಟಿಗೆಹಾರ (Banakal – Mudigere) ನಡುವೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

ಈ ವೇಳೆ ಓಮ್ನಿ ಹಿಂಬದಿಯಲ್ಲಿದ್ದ ಮಾರುತಿ ಆಲ್ಟೋ ಕಾರು ಕೂಡ ಓಮ್ನಿಗೆ ಗುದ್ದಿ ಸರಣಿ ಅಪಘಾತ ನಡೆದಿದೆ.

ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತರು ಚಿತ್ರದುರ್ಗ ಮೂಲದವರಾಗಿದ್ದು, ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು ವಾಪಸ್ ಆಗುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಮೂವರ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಮೆಸ್ಕಾಂ ಲಾರಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತು ಸಿಗದಂತಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Leave a Comment

error: Content is protected !!