CHIKKAMAGALURU | ಖಾಸಗಿ ಎಸ್ಟೇಟ್ ಒಂದರಲ್ಲಿ ಜಿಂಕೆ ಶಿಕಾರಿ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಐವರ ತಂಡವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಹೆಬ್ಬೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬರುವ ಚಿಕ್ಕಮಗಳೂರು ತಾಲೂಕು ಕೋಡಿ ಗ್ರಾಮದಲ್ಲಿ ಚುಕ್ಕಿಜಿಂಕೆ ಬೇಟೆಯಾಡಿ ಕಾರಿನಲ್ಲಿ ಸಾಗಿಸಲಾಗುತ್ತಿತ್ತು.
ಭದ್ರಾ ವನ್ಯಜೀವಿ ವಿಭಾಗದ ಬೇಟೆ ತಡೆ ಶಿಬಿರದ ಸಿಬ್ಬಂದಿಗಳು ತಡೆದು ಪರಿಶೀಲಿಸಿದಾಗ ಕಾರಿನಲ್ಲಿ ಸಿಂಗಲ್ ಬ್ಯಾರೆಲ್ ಗನ್ ಹಾಗೂ ಜಿಂಕೆಯ ಅವಶೇಷ ಪತ್ತೆಯಾಗಿದೆ.