ಮನೆ ಬೀಗ ಮುರಿದು ಲಕ್ಷಾಂತರ ರೂ. ನಗದು ಕಳವು !

Written by Malnadtimes.in

Updated on:

WhatsApp Group Join Now
Telegram Group Join Now

ರಿಪ್ಪನ್‌ಪೇಟೆ: ಕೋಡೂರು (Kodur) ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಕಳ್ಳತನ (Theft) ಮಾಡಿರುವ ಘಟನೆ ನಡೆದಿದೆ.

ಕೋಡೂರು ಗ್ರಾಮದ ಫಯಾಜ್ ಎಂಬುವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಕುಟುಂಬ ಸಹಿತ ಅಂಬ್ಲಿಗೊಳ ಗ್ರಾಮಕ್ಕೆ ತೆರಳಿದ್ದು ಆ ಸಮಯದಲ್ಲಿ ಈ ಕೃತ್ಯ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು ಬೀರುವಿನಲ್ಲಿಟ್ಟಿದ 1.40 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿದ್ದಾರೆ.

ಮದುವೆ ಮುಗಿಸಿಕೊಂಡ ಮನೆಗೆ ಹಿಂತಿರುಗಿದಾಗ ಫಯಾಜ್ ಮನೆ ಕಳ್ಳತನವಾಗಿರುವ ಬಗ್ಗೆ ಗಮನಕ್ಕೆ ಬಂದು ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಸ್ಥಳಕ್ಕೆ ಪಿಎಸ್‌ಐ ಕೆ.ವೈ.ನಿಂಗರಾಜ್ ಮತ್ತು ಸಿಬ್ಬಂದಿವರ್ಗ ತೆರಳಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ !

ರಿಪ್ಪನ್‌ಪೇಟೆ: ಯುವಕನೋರ್ವ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ (Suicide) ಶರಣಾದ ಘಟನೆ ವರದಿಯಾಗಿದೆ.

ಕೋಡೂರು (Kodur) ಗ್ರಾಮದ ಮಸೀದಿ ರಸ್ತೆಯ ಹರೀಶ್ (30) ಮೃತಪಟ್ಟ ಯುವಕ. ಕೋಡೂರು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಹರೀಶ್ ಕಳೆದ ಐದಾರು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು ಆಗಾಗ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹಳೆಯ ಮನೆಯಲ್ಲಿ ವಾಸವಾಗಿರುತಿದ್ದನು. ಗುರುವಾರ ರಾತ್ರಿ ಮದ್ಯದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Comment

error: Content is protected !!