ಅಮೃತ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ.100 ಫಲಿತಾಂಶ | ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ

Written by Malnadtimes.in

Published on:

WhatsApp Group Join Now
Telegram Group Join Now

Ripponpete | ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಷೀರ್ ಅಹಮದ್ ರವರ ನೇತೃತ್ವದಲ್ಲಿ ಇಲ್ಲಿನ ಅಮೃತ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸರ್ಕಾರಿ ಪ್ರೌಢಶಾಲೆಗೆ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ಶಾಲೆಯ ಶಿಕ್ಷಕರುಗಳಿಗೆ ಪೌರ ಸನ್ಮಾನ ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 17 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಮೃತ ಗ್ರಾಪಂ ಮಾಜಿ ಅಧ್ಯಕ್ಷ ಬಷೀರ್ ಅಹಮದ್, 1986ನೇ ಇಸವಿಯಲ್ಲಿ ಪ್ರಾರಂಭವಾದ ಈ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಈ ಶಾಲೆಯ ಬಗ್ಗೆ ಗರ್ತಿಕೆರೆ ವ್ಯಾಪ್ತಿಯ ಸಾರ್ವಜನಿಕರಿ ವಿಶೇಷವಾದ ಗೌರವವಿದೆ. ಈ ಶಾಲೆಯಲ್ಲಿರು ಅತ್ಯುತ್ತಮ ಬೋಧಕ ವರ್ಗದಿಂದ ಈ ಬಾರಿ ನೂರಕ್ಕೆ ನೂರು ಫಲಿತಾಂಶ ಬಂದಿರುವುದು ಸಂತಸ ತಂದಿದೆ. ಆ ಹಿನ್ನಲೆಯಲ್ಲಿ ಸಾರ್ವಜನಿಕರೆಲ್ಲಾ ಸೇರಿ ಈ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಬಂಡಿ ರಾಮಚಂದ್ರ ಮಾತನಾಡಿ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂಥದ್ದು. ಶಿಕ್ಷಕರುಗಳ ಪ್ರಾಮಾಣಿಕ ಕರ್ತವ್ಯ ಮತ್ತು ಪ್ರೇರಣೆಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇಕಡ ನೂರರಷ್ಟು ಫಲಿತಾಂಶವನ್ನು ಪಡೆದುಕೊಳ್ಳುವುದರ ಮೂಲಕ ಶಾಲೆಗೆ ಹಾಗೂ ಈ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಪೋಷಕರು ಸಹ ಉತ್ತಮ ಸಹಕಾರವನ್ನು ನೀಡುವುದರ ಮೂಲಕ ಈ ಫಲಿತಾಂಶಕ್ಕೆ ಕಾರಣಭೂತರಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ವಿಶ್ವನಾಥ್, ಸಿಡಿಸಿ ಉಪಾಧ್ಯಕ್ಷ ಸೋಮಶೇಖರ್ ಎಸ್ಡಿಎಂಸಿ ಅಧ್ಯಕ್ಷ ನಾಗೇಶ್, ಪ್ರಮುಖರಾದ ಹುಗುಡಿ ವರ್ತೇಶ್ ಹಾಗೂ ಇನ್ನಿತರರಿದ್ದರು.

Leave a Comment

error: Content is protected !!