RIPPONPETE | ರಾಜ್ಯದಲ್ಲಿ ಅತ್ಯುತ್ತಮ ಶಾಲೆ ಎಂದು ಖ್ಯಾತಿ ಪಡೆದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿದರಹಳ್ಳಿಗೆ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಶಿಕ್ಷಣ ಸಚಿವ ಬಿ. ನಾಗೇಶ್ ಅವರು ಖುದ್ದು ಭೇಟಿ ನೀಡಿ ಶಾಲೆಯ ವಾತಾವರಣವನ್ನು ನೋಡಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲಿ ಭೇಟಿ ನೀಡುವಂತೆ ಕರೆ ಮಾಡಿದ್ದರು.
ಈ ಶಾಲೆಗೆ ಮತ್ತೊಂದು ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಅನ್ನಪೂರ್ಣ
ಟ್ರಸ್ಟ್ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಅತ್ಯುತ್ತಮ ಪರಿಸರ ಸ್ನೇಹಿ ಶಾಲೆಗೆ ಪಾತ್ರವಾಗಿದೆ.
ಪ್ರಕೃತಿ ಸೌಂದರ್ಯದ ನಡುವೆ ಅತ್ಯುತ್ತಮ ಪರಿಸರ ನಿರ್ಮಿಸಿ ಅತ್ಯಂತ ಗುಣಮಟ್ಟ ಶಿಕ್ಷಣದ ಜೊತೆಗೆ ಅತ್ಯುನ್ನತ ಗುಣಮಟ್ಟ ಹೊಂದಿರುವ ಸರ್ಕಾರಿ ಶಾಲೆಗೆ ನೀಡುವ ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ಬಿದರಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಭಾಜನವಾಗಿದೆ.
ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ಪ್ರಶಸ್ತಿ, ರಾಜ್ಯಮಟ್ಟದ ಅತ್ಯುತ್ತಮ ಶಾಲೆ, ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಶಾಲೆಗೆ ಈಗ ರಾಜ್ಯಮಟ್ಟದ ಪರಿಸರ ಸ್ನೇಹಿ ಪರಿಸರ ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.