ಅಡಿಕೆ ಗೊನೆಗೆ ಔಷಧಿ ಸಿಂಪಡಿಸುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು !

Written by Malnadtimes.in

Updated on:

WhatsApp Group Join Now
Telegram Group Join Now

ರಿಪ್ಪನ್‌ಪೇಟೆ : ಅಡಿಕೆ ಗೊನೆಗೆ ಔಷಧಿ ಸಿಂಪಡಿಸುವಾಗ ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಅಮೃತ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ.ಕೆ. (42) ಮೃತ ದುರ್ಧೈವಿ. ಕಮ್ಮಚ್ಚಿ ಗ್ರಾಮದಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಅಡಿಕೆ ಗೊನೆಗೆ ಔಷಧಿ ಸಿಂಪಡಿಸುತ್ತಿದ್ದ ಕಾರ್ಮಿಕ ಪ್ರದೀಪ್ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ‌.

ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಗೆ ನಡೆದಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Leave a Comment

error: Content is protected !!