ಗೋದಾಮಿನ ಬೀಗ ಮುರಿದು 7 ಲಕ್ಷ ರೂ. ಮೌಲ್ಯದ ಅಡಿಕೆ ಮತ್ತು ಗೇರುಬೀಜ ಕಳವು !

Written by Malnadtimes.in

Published on:

WhatsApp Group Join Now
Telegram Group Join Now

ಸೊರಬ: ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ಮೂಡುಗೋಡು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು. ಶುಕ್ರವಾರ ಬೆಳಗ್ಗೆ ಗೋದಾಮಿಗೆ ತೆರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಗೋದಾಮಿನ ಬೀಗ ಮುರಿದು ಗೋದಾಮಿನಲ್ಲಿದ್ದ 3 ಲಕ್ಷ ರೂ., ಮೌಲ್ಯದ 15 ಕ್ವಿಂಟಾಲ್ ಒಣ ಸಿಪ್ಪೆ ಗೋಡು ಅಡಿಕೆ, 2.4 ಲಕ್ಷ ರೂ., ಮೌಲ್ಯದ 6 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ ಸುಮಾರು 1.2 ಲಕ್ಷ ರೂ., ಮೌಲ್ಯದ 10 ಕ್ವಿಂಟಾಲ್ ಗೇರು ಬೀಜವನ್ನು ಕಳ್ಳತನ ಮಾಡಲಾಗಿದೆ.

ಜಯಕುಮಾರ್ ನೀಡಿದ ದೂರಿನನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶಿವಮೊಗ್ಗದ ಬೆಳರಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಲಿದ್ದಾರೆ.

Leave a Comment

error: Content is protected !!