ನಾಗರಹಳ್ಳಿಯಲ್ಲಿ ಸಂಭ್ರಮದಿಂದ ಜರುಗಿದ ಪ್ರತಿಷ್ಟಾವರ್ಧಂತಿ ಹಾಗೂ ಶಂಕರಾಚಾರ್ಯರ ಜಯಂತಿ ಮಹೋತ್ಸವ

Written by Malnadtimes.in

Published on:

WhatsApp Group Join Now
Telegram Group Join Now

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀ ನಾಗೇಂದ್ರಸ್ವಾಮಿಯ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮತ್ತು ಶ್ರೀ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ವಿಶೇಷ ಪೂಜಾ ಕಾರ್ಯಕ್ರಮ ಸಂಭ್ರಮದೊಂದಿಗೆ ಜರುಗಿತು.

ದೇವಸ್ಥಾನದ ಅರ್ಚಕ ಲಕ್ಷ್ಮಿನಾರಾಯಣ ಭಟ್ ಇವರ ನೇತೃತ್ವದಲ್ಲಿ ಪರೋಹಿತ ಬಳಗ ನಾಗೇಂದ್ರಸ್ವಾಮಿಯ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ, ಪಂಚವಿಂಶತಿ ಕಲಶಾಭಿಷೇಕ, ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್, ಹೆಚ್.ಎಂ.ವರ್ತೇಶಗೌಡ ಹುಗುಡಿ ಇನ್ನಿತರರು ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

Leave a Comment

error: Content is protected !!