ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಗೆಲುವು, ಹೊಸನಗರದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Written by Malnadtimes.in

Published on:

WhatsApp Group Join Now
Telegram Group Join Now

ಹೊಸನಗರ : 2024ನೇ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗಿಂತ ಸುಮಾರು 2.40 ಲಕ್ಷಗಳಿಗೂ ಅಧಿಕ ಮತಗಳ ಅಂತರದಿಂದ ಜಯಶಾಲರಾಗಿದ್ದು ಸಂತೋಷಗೊಂಡ ಹೊಸನಗರದ ಬಿಜೆಪಿ ಕಾರ್ಯಕರ್ತರು ಹೊಸನಗರದ ಬಸ್ ನಿಲ್ದಾಣದ ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು‌.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ, ಎನ್.ಆರ್ ದೇವಾನಂದ್, ಸತ್ಯನಾರಾಯಣ ವಿ, ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಕಾಲಸಸಿ ಸತೀಶ್, ನೇರಲೆ ರಮೇಶ್, ಹಾಲಗದ್ದೆ ಉಮೇಶ್, ಮಂಜುನಾಥ್ ಸಂಜೀವ, ಗಣಪತಿ ಬಿಳಗೋಡು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment

error: Content is protected !!