ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಬಸ್ !

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಚರಂಡಿಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬಾಳೂರು ಬಳಿ ನಡೆದಿದೆ.

30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಾಗರದಿಂದ – ಉಡುಪಿ ಕಡೆಗೆ ತೆರಳುತ್ತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ.

ಬಾಳೂರಿನ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ವಿಷಯ ತಿಳಿಯುತ್ತಿದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರಿಗೆ ನೆರವಾಗಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Comment

error: Content is protected !!