ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಈಜು ಸ್ಪರ್ಧೆಯಲ್ಲಿ ಲತಾಭೂಷಣ್’ಗೆ ದ್ವಿತೀಯ ಸ್ಥಾನ, ಸನ್ಮಾನಿಸಿದ ಬೇಳೂರು

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರಿನಲ್ಲಿರುವ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಹೊಸನಗರ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಲತಾಭೂಷಣ್ ಅವರು 50 ಮೀ. ಹಾಗು 100 ಮೀ. ದೂರದ ಫ್ರೀ ಸ್ಟೈಲ್ ವಿಭಾಗದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಎರಡೂ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ವಿಜೇತರಾದ ಹಿನ್ನಲೆಯಲ್ಲಿ ಸಾಗರ ವಿಧಾನಸಭಾ ಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶನಿವಾರ ಶಾಲೆಗೆ ಭೇಟಿ ನೀಡಿ ಶಿಕ್ಷಕಿ ಸಾಧನೆಯನ್ನು ಗೌರವಿಸುವ ಮೂಲಕ ಆತ್ಮೀಯವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಮೇಶ್ ವಸವೆ, ತಹಶೀಲ್ದಾರ್ ರಶ್ಮಿ, ತಾಲೂಕು ಪಂಚಾಯತಿ ಇಒ ನರೇಂದ್ರ ಕುಮಾರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment

error: Content is protected !!