ಕರ್ತವ್ಯ ಲೋಪ, ಹೊಸನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಅಮಾನತು !

Written by Malnadtimes.in

Updated on:

WhatsApp Group Join Now
Telegram Group Join Now

HOSANAGARA | ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಪ್ರಕಾಶ್ ಎನ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಆದೇಶಿಸಿದ್ದಾರೆ.

ಓ.ಸಿ ಮಟ್ಕಾ, ಇಸ್ಪೀಟ್ ಆಡಿಸುವವರೊಂದಿಗೆ ವೈಯಕ್ತಿಕವಾಗಿ ಹಣದ ವ್ಯವಹಾರ ಮಾಡಿಕೊಂಡು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಪೊಲೀಸ್ ಇಲಾಖೆಗೆ ಮುಜುಗರ ಉಂಟು ಮಾಡಿರುವ ಹಾಗೂ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ಸಹಕಾರ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರಕಾಶ್ ರವರನ್ನು ಅಮಾನತುಗೊಳಿಸಲಾಗಿದೆ.

ಆ.18 ರಂದು ಹೊಸನಗರ ಪಿಎಸ್‌ಐ ಠಾಣಾ ವ್ಯಾಪ್ತಿಯ ಮಾರುತಿಪುರ, ಕೇಶವಪುರ ಮತ್ತು ಬಟ್ಟೆಮಲ್ಲಪ್ಪ ಭಾಗದಲ್ಲಿ ರೌಂಡ್ ನಲ್ಲಿದ್ದಾಗ ಪ್ರಕಾಶ್ ರವರು ಹಣ ಹಾಕಿಸಿಕೊಂಡ ಮೊಬೈಲ್ ಸ್ಕ್ರೀನ್ ಶಾಟ್ ಹರಿದಾಡಿದ ವಿಷಯ ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಟ್ಟೆಮಲ್ಲಪ್ಪದ ಅಲಗೇರಿಮಂಡ್ರಿ ಗ್ರಾಮದಲ್ಲಿ ಹಣ ಕಳುಹಿಸಿದವನ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ ಹಣ ಕಳುಹಿಸಿರುವುದು ಕಂಡುಬಂದಿದ್ದು, ಹೊಸನಗರ ಪಿಎಸ್ಐ ಎಸ್ಪಿಗೆ ವರದಿ ಸಲ್ಲಿಸಿದ್ದಾರೆ. ಪರಿಶೀಲನೆ ನಡೆಸಿದ ಎಸ್ಪಿ ಮಿಥುನ್ ಕುಮಾರ್ ಪ್ರಕಾಶ್ ರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Leave a Comment

error: Content is protected !!