ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ, ಆಡಳಿತಾಧಿಕಾರಿ ನೇಮಕ !

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ತಾಲೂಕಿನ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿ ಸಾಗರದ ಸಹಕಾರ ಸಂಘಗಳ ಉಪನಿರ್ದೇಶಕರು ಆದೇಶಿಸಿದ್ದಾರೆ.

ಮಂಗಳವಾರ ಅವರು ಆದೇಶ ನೀಡಿದ್ದು, ಸಂಘದ ಮುಖ್ಯ ಕಾರ‍್ಯನಿರ್ವಹಣಾಧಿಕಾರಿಯನ್ನು ನೇಮಕಗೊಳಿಸುವ ವಿಷಯದಲ್ಲಿ ಆಡಳಿತ ಮಂಡಳಿ ಕಾಯ್ದೆ ಮತ್ತು ನಿಯಮಾನುಸಾರ ಯಾವುದೇ ಕ್ರಮಕೈಗೊಂಡಿಲ್ಲ. ಈ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಉಪನಿರ್ದೇಶಕರು ಕರ್ನಾಟಕ ಸಹಕಾರ ಕಾಯ್ದೆ 1959ರ ಕಲಂ 29ಸಿ(8)(ಸಿ)ಯಲ್ಲಿ ತಿಳಿಸಿರುವಂತೆ ಸಂಘದ ಆಡಳಿತ ಮಂಡಳಿ ಸದಸ್ಯರು ಕಾಯ್ದೆ, ನಿಯಮ ಹಾಗೂ ಉಪನಿಯಮಗಳಲ್ಲಿ ನೀಡಲಾದ ನಿರ್ದೇಶನಗಳನ್ನು ಪಾಲಿಸದೇ ವಿರುದ್ಧವಾಗಿ ವರ್ತಿಸುತ್ತಿರುವುದರಿಂದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿದ್ದಾರೆ.

ಆಡಳಿತ ಮಂಡಳಿ ಶೂನ್ಯವಾಗಿರುವ ಹಿನ್ನೆಲೆಯಲ್ಲಿ ಹೊಸನಗರದ ಸಹಕಾರ ಅಭಿವೃದ್ಧಿ ಅಧಿಕಾರಿಯನ್ನು ಮುಂದಿನ 6 ತಿಂಗಳು ಅವಧಿಗೆ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

Leave a Comment

error: Content is protected !!