ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಮುಸುಕುದಾರಿ !

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲು ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆ. 22ರಂದು ಕರ್ತವ್ಯ ನಿರತರಾಗಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವ ಅಂಗನವಾಡಿಗೆ ನುಗ್ಗಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಂಬವರಿಗೆ ಬೆದರಿಸಿ ಅವರ ಕೊರಳಲ್ಲಿದ್ದ 42 ಗ್ರಾಂ ತೂಕದ ಅಂದಾಜು 3.20 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವುದಾಗಿ ವರದಿಯಾಗಿದೆ.

ಈ ದರೋಡೆ ಪ್ರಕರಣದ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖಾ ಕ್ರಮ ಕೈಗೊಂಡಿದ್ದಾರೆ.

ತಾಲೂಕಿನ ಅಂಗನವಾಡಿ ಹಾಗೂ ಮಿನಿ ಅಂಗನವಾಡಿ ಕೇಂದ್ರಗಳು ಜನ ಸಂಚಾರವಿಲ್ಲದ ಕಡೆಗಳಲ್ಲಿ ನಡೆಸಲಾಗುತ್ತಿದ್ದು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅಂಗನವಾಡಿ ಕಾರ್ಯಕರ್ತೆಯರು ಆತಂಕ ವ್ಯಕ್ತಪಡಿಸಿದ್ದಾರೆ.

Leave a Comment

error: Content is protected !!