Rain Alert | ಇನ್ನೊಂದು ವಾರ ಭಾರಿ ಮಳೆ ಮುನ್ನೆಚ್ಚರಿಕೆ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Written by Malnadtimes.in

Published on:

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಹಲವೆಡೆ ಕಳೆದ ಕೆಲ ದಿನಗಳಿಂದ ಮಳೆರಾಯ (Rain) ಅಬ್ಬರಿಸುತ್ತಿದ್ದು ಇನ್ನೂ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಮೇ 20ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ (Shivamogga), ಉಡುಪಿ (Udupi), ಚಿಕ್ಕಮಗಳೂರು (Chikkamagaluru), ದಕ್ಷಿಣ ಕನ್ನಡ (Dakshina Kannada), ಹಾಸನ (Hasana), ಕೊಡಗು (Kodagu), ಚಾಮರಾಜನಗರ (Chamarajanagara) ಮತ್ತು ಮೈಸೂರು (Mysore) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಾಳೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Leave a Comment

error: Content is protected !!