ಜಿಲ್ಲಾ ಸಹಕಾರಿ ಯೂನಿಯನ್ ಬ್ಯಾಂಕ್ ಅಧ್ಯಕ್ಷರಾಗಿ ವಾಟಗೋಡು ಸುರೇಶ್ ಆಯ್ಕೆ ; ಅಭಿನಂದನೆ

Written by Malnadtimes.in

Updated on:

WhatsApp Group Join Now
Telegram Group Join Now

HOSANAGARA | ತಾಲ್ಲೂಕು ಹರಿದ್ರಾವತಿ ಗ್ರಾ.ಪಂ. ವ್ಯಾಪ್ತಿಯ ವಾಟಗೋಡು ಸುರೇಶ್‌ ಜಿಲ್ಲಾ ಸಹಕಾರಿ ಯೂನಿಯನ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ವಾಟಗೋಡು ಸುರೇಶ್‌ ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು ಜಿಲ್ಲಾ ಸಹಕಾರಿ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಆರ್.ಎಂ. ಮಂಜುನಾಥ್ ಗೌಡರವರ ಗರಡಿಯಲ್ಲಿ ಬೆಳೆದವರಾಗಿದ್ದಾರೆ.

ಅಭಿನಂದನೆ :

ಜಿಲ್ಲಾ ಸಹಕಾರಿ ಯೂನಿಯನ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಾಟಗೋಡು ಸುರೇಶ್‌ರವರಿಗೆ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ನಿರ್ದೆಶಕರಾದ ಎಂ.ಎಂ.ಪರಮೇಶ್, ಹೆಚ್. ವಿ ಹರೀಶ್ ಹಾಲುಗುಡ್ಡೆ, ಗಣೇಶ್‌ರಾವ್ ಕೆರೆಹಳ್ಳಿ ಇನ್ನೂ ಮುಂತಾದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Comment

error: Content is protected !!