ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ; ಆರಗ ಜ್ಞಾನೇಂದ್ರ

Written by Malnadtimes.in

Published on:

WhatsApp Group Join Now
Telegram Group Join Now

ರಿಪ್ಪನ್‌ಪೇಟೆ: ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3 ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಭೋಜೆಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಅವರು ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಮೇಲ್ಮನೆ ಹಿರಿಯ ಆನುಭವಿಗಳ ಸದನ ಅಲ್ಲಿಗೆ ಪ್ರಜ್ಞಾವಂತರ ಹಾಗೂ ಪ್ರಾಮಾಣಿಕ ಸೇವೆಸಲ್ಲಿಸುವ ಮನೋಭಾವ ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಪಕ್ಷ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಪಕ್ಷದ ಕಾರ್ಯಕರ್ತರು ಮತದಾರರ ಮನ ತಲುಪುವಲ್ಲಿ ಸಫಲರಾಗಿದ್ದಾರೆ. ಮೈತ್ರಿ ಆಭ್ಯರ್ಥಿಗಳಾದ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಈಗಾಗಲೇ ಮೇಲ್ಮನೆಯಲ್ಲಿ ಸೇವೆ ಸಲ್ಲಿಸಿ ಅನುಭವಿ ರಾಜಕಾರಣಿ ಭೋಜೇಗೌಡ ಈ ಕ್ಷೇತ್ರದ ಮತದಾರರ ಮನಮುಟ್ಟುವಲ್ಲಿ ಸಫಲರಾಗಿದ್ದಾರೆ. ನಾನು ಈಗಾಗಲೇ ಪ್ರವಾಸ ಮಾಡಿದ ಕಡೆಯಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಿದ್ದು ಈ ಅಭ್ಯರ್ಥಿಗಳ ಗೆಲುವು ನಿಶ್ಚಿತವೆಂದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಪದವಿ ಕಾಲೇಜ್‌ಗೆ ಭೇಟಿ ನೀಡಿ ಮೈತ್ರಿ ಆಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Leave a Comment

error: Content is protected !!