ಶಿವಮೊಗ್ಗ : ಕಾರು (Car) ಪಲ್ಟಿಯಾಗಿ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿ (Death) ಐವರು ಗಾಯಗೊಂಡ (Injured) ಘಟನೆ ಶಿವಮೊಗ್ಗ (Shivamogga) ತಾಲೂಕಿನ ಗಾಜನೂರು (Gajanuru) ಸಮೀಪ ಭಾನುವಾರ ರಾತ್ರಿ ನಡೆದಿದೆ.
ವಿದ್ಯಾನಗರ ನಿವಾಸಿ, ಕೃಷಿಕ ಕೃಷ್ಣಮೂರ್ತಿ ಅವರ ಪುತ್ರ ಪ್ರಜ್ವಲ್ (22) ಮೃತ ದುರ್ಧೈವಿ. ಕೃಷ್ಣಮೂರ್ತಿ ಮೂಲತಃ ಚನ್ನಗಿರಿ ತಾಲ್ಲೂಕಿನ ಬೆಟ್ಟದಕಡೂರಿನವರು. ಪ್ರಜ್ವಲ್ ಹಾಗೂ ಸ್ನೇಹಿತರು ಎರಡು ವಾಹನಗಳಲ್ಲಿ ಮಂಡಗದ್ದೆಗೆ ಊಟಕ್ಕೆ ತೆರಳಿದ್ದರು. ರಾತ್ರಿ ಊಟ ಮುಗಿಸಿ ವಾಪಸ್ ಬರುವಾಗ ಕಾರಿಗೆ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.