SHIVAMOGGA | ಸಹಕಾರಿ ಭೀಷ್ಮ ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಡಾ. ಆರ್ ಎಂ ಮಂಜುನಾಥಗೌಡ ಶಿಷ್ಯ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರು ಬೇಳೂರು ಗೋಪಾಲಕೃಷ್ಣ ಅವರ ಬೆಂಬಲಿಗರು ಕಾಂಗ್ರೆಸ್ ಮುಖಂಡರು ಬ್ರಾಹ್ಮಣ ಸಮಾಜದ ರಾಜ್ಯ ಯುವ ನಾಯಕರಾದ ಶಿಮುಲ್ (ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟ) ಗೆ ಹೊಸನಗರದಿಂದ 3ನೇ ಬಾರಿ ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಗುರುಶಕ್ತಿ ವಿದ್ಯಾಧರ್ ಇಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ 2ನೇ ಬಾರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಇನ್ನೂ ಉಪಾಧ್ಯಕ್ಷರಾಗಿ ದಾವಣಗೆರೆಯ ಚೇತನ್ ಎಸ್ ನಾಡಿಗರ್ ಇವರು ಕೂಡ ಆಯ್ಕೆಯಾಗಿದ್ದಾರೆ.
ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ 👇 https://www.facebook.com/share/v/NaDY1hzS4KEj196K/?mibextid=jmPrMh
ರಾಜ್ಯ ಕಾಂಗ್ರೆಸ್ ನಾಯಕರುಗಳ ಮಾರ್ಗದರ್ಶನದಲ್ಲಿ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರು ಗೋಪಾಲಕೃಷ್ಣ ಬೇಳೂರು ಮತ್ತು ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಶಿಮುಲ್ ನಿರ್ದೇಶಕರು ಡಾ. ಆರ್ ಎಂ ಮಂಜುನಾಥಗೌಡ ಅವರ ಸಾರಥ್ಯದಲ್ಲಿ ಎಲ್ಲಾ ನಿರ್ದೇಶಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಷ್ಠಿತ ಈ ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ತೆಕ್ಕೆಗೆ ಶಿಮುಲ್ ವಶವಾಗಿದೆ.